ನನ್ನ ಮಗನದ್ದು ಸಹಜ ಸಾವಲ್ಲ: ಪರೇಶ್ ಮೇಸ್ತ ತಂದೆ

195

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಡಿಸೆಂಬರ್ 6ರಂದು ಪರೇಶ್ ಮೇಸ್ತ ಅನ್ನೋ ಯುವಕ ನಾಪತ್ತೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂದಿನ ಕಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಡಿಸೆಂಬರ್ 11, 2017ರಲ್ಲಿ ಕಾರವಾರ, ಹೊನ್ನಾವರ, ಕುಮಟಾ, ಮುಂಡುಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದ ವೇಳೆ ಹಿಂಸಾಚಾರ ಪಡೆದುಕೊಂಡಿತ್ತು.

ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು, ಪ್ರಕರಣವನ್ನು ಸಿಬಿಐಗೆ ವಹಿಸಲಾಗುವುದು ಎಂದಿದ್ದರು. ಇದರಲ್ಲಿ ಐವರನ್ನು ಬಂಧಿಸಲಾಗಿದೆ. ನಾಲ್ಕೂವರೆ ವರ್ಷದ ನಂತರ ಸಿಬಿಐ ತನ್ನ ವರದಿಯನ್ನು ಕೋರ್ಟಿಗೆ ಸಲ್ಲಿಸಿದೆ. ವರದಿಯಲ್ಲಿ ಪರೇಶ್ ಮೇಸ್ತ ಸಾವು ಸಹಜವೆಂದು ಇದೆಯಂತೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೃತ ಯುವಕನ ತಂದೆ, ನನ್ನ ಮಗನದ್ದು ಸಹಜ ಸಾವಲ್ಲ. ಆತನನ್ನು ಕೊಲೆ ಮಾಡಲಾಗಿದೆ ಎಂದಿದ್ದಾರೆ.

ಅಂದಿನ ಪೊಲೀಸ್ ಇಲಾಖೆ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ. ಸಾಕ್ಷಿ ನಾಶ ಮಾಡಿದ್ದಾರೆ. ಮುಖಂಡರೊಂದಿಗೆ, ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಕಮಲಾಕರ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!