ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸಂಸತ್ ಬಜೆಟ್ ಅಧಿವೇಶನ 2022 ಸೋಮವಾರದಿಂದ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದಾರೆ.
ಕರೋನಾ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಡಿ ದೇಶದವನ್ನು ಸುಭದ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರೋನಾ ವಾರಿಯರ್ಸ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೇ 75 ವರ್ಷಗಳನ್ನು ಪೂರೈಸಿರುವ ಭಾರತ ಸಾಧಿಸಿದ ಪ್ರಗತಿ, ಅಭಿವೃದ್ಧಿ ಕೆಲಸ, ದೇಶದ ಸ್ವಾತಂತ್ರ್ಯಕ್ಕೆ ಮಡಿದ ಗಣ್ಯರನ್ನು ಸ್ಮರಿಸಿಕೊಂಡಿದ್ದಾರೆ.
ಇನ್ನು ಜನವರಿ 23 ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದಿಂದ ಗಣರಾಜ್ಯೋತ್ಸವದ ಸಂಭ್ರಮ ಶುರುವಾಗಲಿದೆ. ಇದರಿಂದ ಕಲಿಯುವುದು ಹಾಗೂ ನೆನಪಿಟ್ಟುಕೊಳ್ಳುವುದು ತುಂಬಾ ಇದೆ ಎಂದು ರಾಷ್ಟ್ರಪತಿ ಕೋವಿಂದ್ ಅವರು ತಿಳಿಸಿದರು.