ಪತ್ನಿ ಮೇಲೆ ಪತಿ ಕುಡುಗೋಲಿನಿಂದ ಗಂಭೀರ ಹಲ್ಲೆ

99

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಪತ್ನಿಯ ಮೇಲೆ ಕುಡುಗೋಲಿನಿಂದ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಳಿಕೋಟೆ ರಸ್ತೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಯಲ್ಲಮ್ಮ ಕಾಳಗಿ(36) ಗಂಭೀರವಾಗಿ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಪತಿ-ಪತ್ನಿ ದೂರವಿದ್ದರು. ಕಾಯಿಪಲ್ಯ ವ್ಯಾಪಾರ ಮಾಡಿಕೊಂಡು ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಜೀವನ ನಡೆಸುತ್ತಿದ್ದಳು. ಕಾಯಿಪಲ್ಯ ಖರೀದಿಗೆ ಹೊರಟಿದ್ದ ವೇಳೆ ಪತಿ ಸಿದ್ದಪ್ಪ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಬಿಡಿಸಲು ಹೋದ ಸಾರ್ವಜನಿಕರಿಗೆ ಕುಡುಗೋಲು ತೋರಿಸಿ ಹೆದರಿಸಿದ್ದಾನೆ.

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!