ಪ.ಪಂ, ಪುರಸಭೆ ಮೀಸಲಾತಿಗೆ ಹೈಕೋರ್ಟ್ ಮಧ್ಯಂತರ ತಡೆ

308

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಅಕ್ಟೋಬರ್ 8ರಂದು ಪಟ್ಟಣ ಪಂಚಾಯ್ತಿ, ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿತ್ತು. ಅದರಂತೆ ಚುನಾವಣೆ ನಡೆಯಲು ಸಿದ್ಧತೆ ನಡೆದಿರುವ ಹೊತ್ತಿನಲ್ಲಿ, ಹೈಕೋರ್ಟ್ ಇದೀಗ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮೀಸಲಾತಿ ಪ್ರಶ್ನಿಸಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪುರಸಭೆ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

 ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ ಅವರಿದ್ದ ಏಕಸದಸ್ಯಪೀಠ ಅರ್ಜಿಯ ವಿಚಾರಣೆಯನ್ನ ಅಕ್ಟೋಬರ್ 22ಕ್ಕೆ ಮುಂದೂಡಿಕೆ ಮಾಡಿದ್ದು, ಅಲ್ಲಿಯ ತನಕ ಅಧಿಸೂಚನೆಯ ಆದೇಶಕ್ಕೆ ತಡೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!