ಚೇತನರನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ

148

ಪ್ರಜಾಸ್ತ್ರ ಸುದ್ದಿ

ಮೈಸೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಇತ್ತೀಚೆಗೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಎರಡ್ಮೂರು ದಿನಗಳ ಹಿಂದೆ ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದ ವೇಳೆ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು.

ಆ ಮೂವರನ್ನು ವಿದ್ಯಾರ್ಥಿಗಳನ್ನು ಬಂಧಿಸಿ ಆಮೇಲೆ ಬಿಡುಗಡೆ ಮಾಡಲಾಯಿತು. ಇದನ್ನು ಸಮರ್ಥಿಸಿದ ಚೇತನ್, ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದರು. ಪಾಕಿಸ್ತಾನದವರು ನಮ್ಮ ಶತ್ರುಗಳು ಅಲ್ಲ. ಅವರು ನಮ್ಮ ಸಹೋದರ, ಸಹೋದರಿಯರು ಎಂದಿದ್ದರು.

ಇದನ್ನು ಹಿಂದೂಪರ ಸಂಘಟನೆಗಳು ಖಂಡಿಸಿದವು. ಈಗ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ ಪೇ ಚೇತನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಚೇತನ್ ಭಾರತದಲ್ಲಿ ಇರಲು ಯೋಗ್ಯನಲ್ಲ. ಪಾಕಿಸ್ತಾನಕ್ಕೆ ಕಳುಹಿಸಲು ಅಭಿಯಾನ ನಡೆಸುತ್ತಿದ್ದೇವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!