ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಈಗಾಗ್ಲೇ 40 ಪರ್ಸೆಂಟ್ ಸರ್ಕಾರ ಅನ್ನೋ ಕಪ್ಪು ಚುಕ್ಕೆ ಕುತ್ತಿದೆ. ದೇಶದ ವಿವಿಧ ರಾಜ್ಯಗಳಲ್ಲಿಯೂ ಈ ಬಗ್ಗೆ ಚರ್ಚೆ, ಆಕ್ರೋಶ ವ್ಯಕ್ತವಾಗಿದೆ. ಇದೀಗ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನ ನಡೆಸಿದೆ. ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಆನ್ ಲೈನ್ ಪೇಮೆಂಟ್ ಗೆ ಸಂಬಂಧಿಸಿದಂತೆ ಹಲವು ಆ್ಯಪ್ ಗಳಿವೆ. ಅದರಂತೆ ಪೇ ಸಿಎಂ ಅಭಿಯಾನ ನಡೆಸಿದ್ದು, ಕ್ಯೂಆರ್ ಕೋಡ್ ಜಾಗದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಫೋಟೋ ಪ್ರಿಂಟ್ ಹಾಕಲಾಗಿದೆ. ಹೀಗಾಗಿ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ ನಡೆದಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಘನತೆಯಿಂದ ಸಿಎಂ ವಿರುದ್ಧ ಟೀಕೆ ಮಾಡಬೇಕು ಎಂದಿದ್ದಾರೆ.