ಪೇಜಾವರ ಶ್ರೀಗಳ ಆರೋಗ್ಯ ಗಂಭೀರ: ಗಣ್ಯರ ಭೇಟಿಗೆ ನಿರ್ಬಂಧ

350

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಗಂಭೀರತೆ ಕಂಡು ಬಂದಿದೆ. ಹೀಗಾಗಿ ಅವರನ್ನ ಭೇಟಿಯಾಗಲು ಗಣ್ಯರು ಆಸ್ಪತ್ರೆಗೆ ಆಗಮಿಸ್ತಿದ್ದು, ಇದಕ್ಕೆ ನಿರ್ಬಂಧ ಹೇರಲಾಗಿದೆ.

ಶ್ರೀಗಳ ಆರೋಗ್ಯದಲ್ಲಿ ಗಂಭೀರತೆ ಕಾಣಿಸಿಕೊಂಡಿರುವುದ್ರಿಂದ ಬೆಂಗಳೂರಿನಿಂದ ಇಬ್ಬರು ನುರಿತ ವೈದ್ಯರನ್ನ ಕರೆಸಿಕೊಳ್ಳಲಾಗಿದೆ. ಕಳೆದ ರಾತ್ರಿ ಎಂಆರ್ ಐ ಸ್ಕ್ಯಾನಿಂಗ್ ಮಾಡಿದ್ದು ಅದರ ರಿಪೋರ್ಟ್ ಗಾಗಿ ವೈದ್ಯರು ಕಾಯುತ್ತಿದ್ದಾರೆ. ಇನ್ನು ಇಂದಿನಿಂದ 2 ದಿನಗಳ ಕಾಲ ಉಡುಪಿ ಪ್ರವಾಸದಲ್ಲಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಮಧ್ಯಾಹ್ನ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಶ್ರೀಗಳ ಆರೋಗ್ಯದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಅವರ ಚಿಕಿತ್ಸೆಗೆ ತೊಂದರೆಯಾಗಬಾರದು ಅನ್ನೋ ಕಾರಣಕ್ಕೆ ಆಸ್ಪತ್ರೆಗೆ ಬರುವ ಗಣ್ಯರ ಭೇಟಿಗೆ ನಿರ್ಬಂಧ ಹೇರಲಾಗಿದೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!