ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಇಂದು ಬೆಳಗ್ಗೆ ಅನಾರೋಗ್ಯದ ಕಾರಣದಿಂದ ನಗರದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ತಡರಾತ್ರಿ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಕ್ತದ ಚಲನೆಯಲ್ಲಿ ದಿಢೀರ್ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೆಎಂಸಿಗೆ ಇಂದು ಮುಂಜಾನೆ ದಾಖಲು ಮಾಡಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡ್ತಿದ್ದು ನ್ಯುಮೋನಿಯಾ ಸಮಸ್ಯಯಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ 24 ಗಂಟೆವರೆಗೂ ಯಾರಿಗೂ ಭೇಟಿಗೆ ಅವಕಾಶವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.