ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ ನಡೆಸಲಾಯ್ತು. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಬೈಕ್ ನ್ನ ಚಟದ ಮೇಲೆ ಇಟ್ಟುಕೊಂಡು ಮೆರವಣಿಗೆ ಮಾಡಿದ್ರು.
ಈ ವೇಳೆ ಮಾತ್ನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಮನುಷ್ಯತ್ವ ಇಲ್ಲ. ಅವರದು ರಾಕ್ಷಸ ಪ್ರವೃತ್ತಿ ಎಂದು ವಾಗ್ದಾಳಿ ನಡೆಸಿದ್ರು. ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸ್ವಲ್ಪ ಬೆಲೆ ಏರಿಕೆ ಮಾಡಿದ್ದಕ್ಕೆ, ಗ್ಯಾಸ್ ಗಳನ್ನ ತಲೆ ಮೇಲೆ ಹೊತ್ತುಕೊಂಡು ಬೀದಿಗೆ ಇಳಿಯುತ್ತಿದ್ರು. ಈಗೇಕೆ ಮಾತ್ನಾಡ್ತಿಲ್ಲವೆಂದು ಕಿಡಿ ಕಾರಿದ್ರು.
ಈ ವೇಳೆ ಡಿಕೆ ಶಿವಕುಮಾರ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಲೀಂ ಅಹ್ಮದ ಸೇರಿದಂತೆ ಅನೇಕರು ಭಾಗವಹಿಸಿದ್ರು.