ಕರ್ನಾಟಕದಲ್ಲಿ ಪೆಟ್ರೋಲ್ ದರ ಕಡಿತ ಇಲ್ಲ: ಸಿಎಂ ಬೊಮ್ಮಾಯಿ

220

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಕ್ಕದ ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆಯ ಮೇಲೆ 3 ರೂಪಾಯಿ ಕಡಿತ ಮಾಡಲಾಗಿದೆ. ಈ ಮೂಲಕ ಸಾರ್ವಜನಿಕರ ಮೇಲೆ ಕೇಂದ್ರ ಸರ್ಕಾರ ಹೇರಿದ ಬೆಲೆ ಏರಿಕೆ ಬಿಸಿಯನ್ನ ಸ್ವಲ್ಪ ಕಡಿಮೆ ಮಾಡಿದೆ. ಇದೆ ಮಾದರಿಯನ್ನ ಕರ್ನಾಟಕದಲ್ಲಿ ಅನುಸರಿಸಬೇಕು ಅನ್ನೋ ಕೂಗು ಎದ್ದಿದೆ. ಆದ್ರೆ, ಇದು ಸಾಧ್ಯವಿಲ್ಲವೆಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್ ದರದಲ್ಲಿ 3 ರೂಪಾಯಿ ಕಡಿತ ಮಾಡುವ ಪ್ರಸ್ತಾಪ ಇಲ್ಲ. ಇಂದು ಮೂರು ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತಿದ್ದೇನೆ. ನಾಳೆ ಮೂರು ಇಲಾಖೆಗಳ ಸಭೆ ನಡೆಸುತ್ತೇನೆ ಅಂತಾ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!