ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿನ ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟಾಚಾರದ ಕುರಿತು ಕೆಲವು ವ್ಯಕ್ತಿಗಳು, ಪಕ್ಷಗಳು, ಸಂಘಟನೆಗಳು ವಿಡಿಯೋ, ಫೋಟೋ ಮಾಡುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಅವಕಾಶವಿಲ್ಲವೆಂದು ರಾಜ್ಯ ಸರ್ಕಾರ ಆದೇಶಿಸಿದೆ.
ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೆ ರಾಜ್ಯದಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ತೆಗೆಯುವಂತಿಲ್ಲವೆಂದು ತಿಳಿಸಿದೆ. ಈ ರೀತಿ ಮಾಡುವುದರಿಂದ ಅಧಿಕಾರಿಗಳಿಗೆ, ಸಿಬ್ಬಂದಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಖಾಸಗಿ ವ್ಯಕ್ತಿಗಳ ತೆಗೆಯುವ ಫೋಟೋ, ವಿಡಿಯೋಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶಿಸಲಾಗಿದೆ.