ಸಿಂದಗಿ: ಕೊಕಟನೂರ ಗ್ರಾಮದಲ್ಲಿ ತಹಶೀಲ್ದಾರ್ ಬಿ.ಎಸ್ ಕಡಕಬಾವಿ ಅವರ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತ್ನಾಡಿದ ತಹಶೀಲ್ದಾರ್ ಅವರು, ಯಾವ ಯಾವ ರೀತಿಯ ಪಿಂಚಣಿಗಳಿವೆ. ಅವುಗಳನ್ನ ರೈತರು ಹೇಗೆ ಸದುಪಯೋಗ ಪಡೆದುಕೊಳ್ಳಬೇಕು ಅನ್ನೋದನ್ನ ತಿಳಿಸಿದ್ರು.
ಇದೇ ವೇಳೆ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನ ವಿತರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಶಿರಸ್ತದಾರ್ ಸಿ.ಬಿ ಬಾಬಾನಗರ, ಕಂದಾಯ ನಿರೀಕ್ಷಕ ಐ.ಎ ಮಕಾನದಾರ, ಗ್ರಾಮ ಲೆಕ್ಕಾಧಿಕಾರಿ ಎನ್.ಎ ಖಾನಪುರ ಸೇರಿದಂತೆ ಹಲವರು ಭಾಗವಹಿಸಿದ್ರು.