ಪ್ರಜಾಸ್ತ್ರ ಸುದ್ದಿ
ಮೈಸೂರು: ಕೇಂದ್ರದ ಮಾಜಿ ಸಚಿವ, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ನ್ಯಾಯಾದ ಹೋರಾಟಗಾರರಾಗಿದ್ದರು. ದೀನದಲಿತರ ಅಭಿವೃದ್ಧಿಗಾಗಿ ಜೀವನ ಮುಡುಪಾಗಿಟ್ಟಿದ್ದರು ಎಂದು ಪ್ರಧಾನಿ ಹೇಳಿದ್ದಾರೆ.
ದಲಿತ, ದಮನಿತರ ದಿಟ್ಟ ದನಿಯಾಗಿದ್ದ ಮುತ್ಸದ್ದಿ ನಾಯಕ ಶ್ರೀನಿವಾಸ್ ಪ್ರಸಾದ್ ನಿಧನ ನನಗೆ ತೀವ್ರ ಆಘಾತ ತಂದಿದೆ. ಅವರ ಅಗಲಿಗೆ ಸಾಮಾಜಿಕ ನ್ಯಾಯ ಪರವಾದ ರಾಜಕೀಯ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.