ರೋಡ್ ನಲ್ಲಿ ಬಿಜೆಪಿ ನಾಯಕರು, ಕಾಂಗ್ರೆಸ್ ವ್ಯಂಗ್ಯ

286

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನಿಂದಾಗಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಸಿಲಿಕಾನ್ ಸಿಟಿಗೆ ಪ್ರಧಾನಿ ಮೋದಿ ಬಂದು ಹೋಗಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ರೋಡಿಗೆ ಬಂದು ಬ್ಯಾರಿಕೇಡ್ ಹತ್ತಿರ ನಿಂತು ಕೈ ಬೀಸಿದ್ದಾರೆ. ಇದಕ್ಕೆ ಇದೀಗ ಟೀಕಾಸ್ತ್ರಗಳು ಶುರುವಾಗಿವೆ.

ಕಾಂಗ್ರೆಸ್ ಕೈಗೆ ಇದು ದೊಡ್ಡ ಅಸ್ತ್ರಕೊಟ್ಟಿದೆ. ಹೀಗಾಗಿ ಕೈ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಆರ್.ಅಶೋಕ್, ಮುನಿರತ್ನ, ಕೆ.ಗೋಪಾಲಯ್ಯ, ಮಾಜಿ ಶಾಸಕ ಲಿಂಬಾವಳಿ ಸೇರಿ ಅನೇಕ ಬಿಜೆಪಿ ನಾಯಕರು ರೋಡ್ ನಲ್ಲಿ ನಿಂತಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಕಾಂಗ್ರೆಸ್ ಭರ್ಜರಿಯಾಗಿ ಕಾಲೆಳೆದಿದೆ.

ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ, ರಾಜಕೀಯ, ಸೈದ್ಧಾಂತಿಕ ವಿರೋಧಿಗಳಾಗಿದ್ದರೂ ಕರ್ನಾಟಿ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತದೆ. ಪ್ರಧಾನಿ ಮೋದಿ ಬ್ಯಾರಿಕೇಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರ ಸ್ವಾಭಿಮಾನ ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕರವಾಗಿದೆ.




Leave a Reply

Your email address will not be published. Required fields are marked *

error: Content is protected !!