ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಹೊಸ ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡುತ್ತಲೇ ಇದೆ. ಕಳೆದ ಎರಡು ದಿನಗಳ ಹಿಂದೆ ದೇಶವನ್ನುದ್ದೇಶಿಸಿ ಮಾತ್ನಾಡಿದ ಪ್ರಧಾನಿ ಇಂದು ಬೆಳಗ್ಗೆ 10 ಗಂಟೆಗೆ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ.
ವರ್ಚ್ಯುಲ್ ಸಭೆ ಮೂಲಕ ಮುಖ್ಯಮಂತ್ರಿಗಳ ಜೊತೆ ಮಾತ್ನಾಡಲಿರುವ ಪ್ರಧಾನಿ, ಕರೋನಾ ನಿಯಂತ್ರಣದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ. ಈ 10 ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಹ ಭಾಗವಹಿಸಲಿದ್ದಾರೆ.