ರಾಜ್ಯದಲ್ಲಿ ಎರಡು ದಿನ ಪ್ರಧಾನಿ ಮೋದಿ ಪ್ರಚಾರ

87

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ಇನ್ನು ಕೇವಲ 11 ದಿನಗಳು ಬಾಕಿ ಉಳಿದಿದ್ದು, ಮತಯಾಚನೆ ಜೋರಾಗಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ರಾಷ್ಟ್ರೀಯ ನಾಯಕರ ದಂಡು ಪ್ರಚಾರ ನಡೆಸಿದೆ. ಶನಿವಾರ ಹಾಗೂ ಭಾನುವಾರ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.

ಇಂದು ಮುಂಜಾನೆ 10.20ಕ್ಕೆ ಬೀದರ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ 10.50 ಹುಮ್ನಾಬಾದ್ ತಲುಪಲಿದ್ದು, 11 ಗಂಟೆಯಿಂದ 11.40ರ ತನಕ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ವಿಜಯಪುರಕ್ಕೆ ಆಗಮಿಸಲಿದ್ದಾರೆ.

ವಿಜಯಪುರದ ಸೈನಿಕ ಶಾಲೆ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಇದನ್ನು ಮುಗಿಸಿಕೊಂಡು ಸಂಜೆ 5.30ಕ್ಕೆ ಬೆಂಗಳೂರು ತಲುಪಲಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಭಾನುವಾರ ಕೋಲಾರ, ಬೇಲೂರು, ಚನ್ನರಾಯಪಟ್ಟಣ, ಮೈಸೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ನಂತರ ಮತ್ತೆ ಮೇ 3ಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!