ಪ್ರಜಾಸ್ತ್ರ ಸುದ್ದಿ
ಬೀನಾ(ಮಧ್ಯಪ್ರದೇಶ): ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜಕೀಯ ಪಕ್ಷಗಳು ರಣತಂತ್ರಳನ್ನು ಹೆಣಿಯುತ್ತಿವೆ. ಇಂದು ಮಧ್ಯಪ್ರದೇಶದ ಬೀನಾ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಭಾರತದ ಸಂಸ್ಕೃತಿ ಮೇಲೆ ದಾಳಿ ನಡೆಸಲು ಹೊರಟಿರುವ ಇಂಡಿಯಾ ಮೈತ್ರಿಕೂಟಕ್ಕೆ ನಾಯಕನಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
50, 700 ಕೋಟಿ ಮೌಲ್ಯದ ವಿವಿಧ ಕಾಮಗಾರಿಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ರೋಡ್ ಶೋ ನಡೆಸಿದರು. ನಂತರ ಮಾತನಾಡಿದ ಅವರು, ಸನಾತನ ಸಂಸ್ಕೃತಿ ನಾಶ ಮಾಡುವ ಅಜೆಂಡಾ ಇಟ್ಟುಕೊಂಡಿದ್ದಾರೆ. ಇವರ ಕೂಟಕ್ಕೆ ನಾಯಕನೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಕಿಡಿ ಕಾರಿದರು.