ಎಷ್ಟೇ ಅವಕಾಶ ನೀಡಿದರೂ ಕಾಂಗ್ರೆಸ್ ಬದಲಾಗಲ್ಲ: ಪ್ರಧಾನಿ

71

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಮಾಜ ವಿರೋಧಿಗಳಿಗೆ ಸರ್ಕಾರ ಬೆಂಬಲ ನೀಡುತ್ತಿದೆ. ಎಷ್ಟೇ ಅವಕಾಶ ನೀಡಿದರೂ ಕಾಂಗ್ರೆಸ್ ಬದಲಾಗಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ನಗರದ ಎನ್.ವಿ ಮೈದಾನದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ. ಈ ಕುಟುಂಬಕ್ಕೆ ಭ್ರಷ್ಟಾಚಾರವೇ ಆಮ್ಲಜನ.  ಭ್ರಷ್ಟಾಚಾರವಿಲ್ಲದೆ ಈ ಜನ ಉಸಿರಾಡಲು ಸಾಧ್ಯವಿಲ್ಲ ಎಂದು ಕಿಡಿ ಕಾರಿದರು.

ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಉಮೇಶ್ ಜಾಧವ್ ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!