ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪ್ರಧಾನಿ ಮೋದಿ ಬೆಂಗಳೂರು ರೈಲು ನಿಲ್ದಾಣದಲ್ಲಿ ವಂದೇ ಭಾರತ ರೈಲಿಗೆ ಶುಕ್ರವಾರ ಚಾಲನೆ ನೀಡಿದರು. ಹಸಿರು ನಿಶಾನೆ ತೋರಿಸುವ ಮೂಲಕ ರಾಜ್ಯದಲ್ಲಿ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು.
ಇದಕ್ಕೂ ಮೊದಲು ದಾಸಶ್ರೇಷ್ಠ ಸಂತ ಕನಕದಾಸರ ಮೂರ್ತಿಗೆ ಗೌರವ ಸಲ್ಲಿಸುವ ಮೂಲಕ ಕನಕದಾಸರ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.