ಪ್ರಜಾಸ್ತ್ರ ಸುದ್ದಿ
ಉನ್ನಾವೊ: ಪ್ರಧಾನಿ ಮೋದಿಯ ಮಂಗಳಸೂತ್ರ ಹೇಳಿಕೆಗೆ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರ ಪತ್ನಿಯರ ಮಂಗಳಸೂತ್ರ ಕಿತ್ತುಕೊಂಡಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸೋಲಿನ ಭಯದಲ್ಲಿ ಮೋದಿ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂರಿಗೆ ಸಮನಾಗಿ ಆಸ್ತಿ ಹಂಚಿಕೆ ಮಾಡುತ್ತೆ ಎಂದು ಮನಮೋಹನ್ ಸಿಂಗ್ ಸಂದರ್ಭದಲ್ಲಿ ಹೇಳದೆ ವಿಚಾರ ಹಾಗೂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಚಾರದ ಬಗ್ಗೆ ಸುಳ್ಳು ಹೇಳುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.