ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೇಶದ ತುಂಬಾ ಕರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಗ್ರಾಮೀಣ ಭಾಗಕ್ಕೂ ವ್ಯಾಪಕವಾಗಿ ಹರಡುತ್ತಿರುವ ಕಾರಣ ಕರ್ನಾಟಕ ಸೇರಿದಂತೆ 10 ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಕರ್ನಾಟಕ, ಬಿಹಾರ, ಆಸ್ಸಾಂ, ಚಂಡೀಗಢ, ತಮಿಳುನಾಡು, ಉತ್ತರಾಖಂಡ, ಗೋವಾ, ದೆಹಲಿ, ಹಿಮಾಚಲಪ್ರದೇಶ ಹಾಗೂ ಮಧ್ಯಪ್ರದೇಶ ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿನ ಕರೋನಾ ಪರಿಸ್ಥಿತಿ, 3ನೇ ಹಂತದ ಲಸಿಕೆ ಅಭಿಯಾನ ಹಾಗೂ ಗ್ರಾಮೀಣ ಭಾಗದಲ್ಲಿ ಕರೋನಾ ನಿಯಂತ್ರಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ.
ಇನ್ನು ಮೇ 20ರಂದು ಉಳಿದ ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ.