ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೊದಲು ತುಮಕೂರಿಗೆ ತೆರಳಿ ಅಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟರ್ ಮೂಲಕ ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ರೈತರ ಆದಾಯ ದ್ವಿಗುಣ, ಜಿಎಸ್ ಟಿ, ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಪರಿಹಾರ, ಕಾವೇರಿ ನೀರು ಹಂಚಿಕೆ ವಿಚಾರ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರ ಮಾಡ್ತಿದ್ದೀರಿ. ಹೀಗಾಗಿ ಹಲವು ಪ್ರಮುಖ ಪ್ರಶ್ನೆಗಳನ್ನ ಕೇಳುವ ಮೂಲಕ ಭರ್ಜರಿಯಾಗಿ ಗುದ್ದು ನೀಡಿದ್ದಾರೆ.