ಪ್ರಜಾಸ್ತ್ರ ಸುದ್ದಿ
ವಿಜಯಪುರ: ನಿಯಮ ಬಾಹಿರವಾಗಿ ವಕೀಲೆಯನ್ನು ಕೋರ್ಟಿಗೆ ಹಾಜರು ಪಡಿಸಿದ ಹಿನ್ನೆಲೆ ಪೇದೆಯನ್ನು ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪೇದೆ ಎ.ಎಸ್ ರಂಗಪ್ಪಗೊಳ ಎಂಬುವರನ್ನು ಎಸ್ಪಿ ಎಚ್.ಡಿ.ಆನಂದಕುಮಾರ್ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ನಿಯಮ ಬಾಹಿರವಾಗಿ ವಕೀಲೆ ಅರುಣಾ ಪಾಟೀಲನ್ನು ಪೇದೆ ರಂಗಪ್ಪಗೊಳ ಕೋರ್ಟ್ಗೆ ಹಾಜರುಪಡಿಸಿದರು. ಇದನ್ನು ಖಂಡಿಸಿ ನಗರದ ಕೋರ್ಟ್ ಸರ್ಕಲ್ ಬಳಿ ವಕೀಲರ ಸಂಘದವರು ಪೇದೆ ವಿರುದ್ಧ ಪ್ರತಿಭಟನೆ ನಡೆಸಿದರು. ಇದಕ್ಕಾಗಿ ಕರ್ತವ್ಯ ನಿರ್ಲಕ್ಷ್ಯ ಹಿನ್ನಲೆ ಅಮಾನತು ಮಾಡಿ ಆದೇಶ ಮಾಡಿದ್ದಾರೆ.