ಪ್ರಜಾಸ್ತ್ರ ಅಪರಾಧ ಸುದ್ದಿ
ತುಮಕೂರು: ತಪ್ಪಿಸಿಕೊಳ್ಳಲು ನೋಡ್ತಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ತಾಲೂಕಿನ ಅಜ್ಜಪ್ಪನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕೊಲೆ ಆರೋಪಿ ಆರ್ ಎಕ್ಸ್ ವಿಕ್ಕಿ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ರೌಡಿ ಶೀಟರ್ ಮಂಜನ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಬಂಧಿಸಲು ಹೋಗಿದ್ದಾರೆ. ಆಗ ವಿಕ್ಕಿ ಎಎಸ್ಐ ಪರಮೇಶ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಶರಣಾಗುವಂತೆ ಪೊಲೀಸರು ಎಷ್ಟು ಹೇಳಿದ್ರೂ ಕೇಳಲಿಲ್ಲ. ಆಗ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.
ಇದೀಗ ಕೊಲೆ ಆರೋಪಿಯನ್ನ ಬಂಧಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.