ನೈಟ್ ಶಿಫ್ಟ್ ಮುಗಿಸಿ ಬಂದ ಪೊಲೀಸ್ ಹೃದಯಾಘತದಿಂದ ಸಾವು

136

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನೈಟ್ ಶಿಫ್ಟ್ ಮುಗಿಸಿಕೊಂಡು ಮನೆಗೆ ಬಂದ ಹೆಡ್ ಕಾನ್ಸ್ ಟೇಬಲ್ ವೊಬ್ಬರು ಹೃದಯಾಘತದಿಂದ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ವೀರುಪಾಕ್ಷಗೌಡ ಮೃತ ದುರ್ದೈವಿ.

ಹೆಬ್ಬಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೀರುಪಾಕ್ಷಗೌಡ ರಾತ್ರಿ ಪಾಳಯದ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಎದೆನೋವು ಎಂದು ಮನೆಯ ಹಾಲ್ ನಲ್ಲಿ ಕುಸಿದು ಬಿದ್ದಿದ್ದಾರೆ. ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ. ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!