ಡಿಸಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪೇದೆ

393

ಬೆಳಗಾವಿ: ಜಿಲ್ಲಾಧಿಕಾರಿ ನಿವಾಸದಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 30 ವರ್ಷದ ಪ್ರಕಾಶ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆಯಾಗಿದ್ದಾನೆ.

ನಗರ ಮೀಸಲು ಶಸ್ತ್ರ ಪೇದೆ ಕಿತ್ತೂರು ತಾಲೂಕಿನ ಅಂಬಡಗಟ್ಟಿಯ ನಿವಾಸಿಯಾಗಿದ್ದಾನೆ. ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಅವರ ಮನೆಯಲ್ಲಿ ಕರ್ತವ್ಯದ ಮೇಲಿದ್ದಾಗ ಸೆಕ್ಯೂರಿಟಿ ರೂಮಿನಲ್ಲಿ ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎರಡು ಮಕ್ಕಳನ್ನ ಹೊಂದಿರುವ ಪ್ರಕಾಶ, ಕರೋನಾ ಕರ್ತವ್ಯದಿಂದಾಗಿ ಎರಡು ತಿಂಗಳಿಂದ ಮನೆಗೆ ಹೋಗಿರ್ಲಿಲ್ಲ. ಕೆಲಸದ ಒತ್ತಡವೇ ಆತ್ಮಹತ್ಯೆಗೆ ಕಾರಣವಾ? ಬೇರೆ ಏನಾದ್ರೂ ವಿಷ್ಯ ಇರಬಹುದು ಗೊತ್ತಿಲ್ಲ. ಪೊಲೀಸ್ ಆಯುಕ್ತ ಲೋಕೇಶ ಹಾಗೂ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.




Leave a Reply

Your email address will not be published. Required fields are marked *

error: Content is protected !!