ಪಿಒಪಿ ಗಣೇಶ ತರುವವರಿಗೆ ಬಿಗ್ ಶಾಕಿಂಗ್ ನ್ಯೂಸ್

652

ಬೆಂಗಳೂರು: ಎಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ಗಣೇಶ ಪೂಜೆ ನಡೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆಯ ಕೆಲಸ ಭರ್ಜರಿಯಾಗಿ ನಡೆದಿದೆ. ಇದರ ನಡುವೆ ಪಿಒಪಿ ಗಣೇಶ ಮೂರ್ತಿಗಳನ್ನ ಖರೀದಿ ಮಾಡಿದವರಿಗೆ ಶಾಕಿಂಗ್ ನ್ಯೂಸ್ ಇದೆ.

ಪರಿಸರ ಇಲಾಖೆ ಮೂರು ದಿನಗಳ ಹಿಂದೆ ಆದೇಶ ಹೊರಡಿಸಿದ್ದು, ಪಿಒಪಿ ಗಣಪತಿಗಳ ವಿಸರ್ಜನೆಗೆ ಅವಕಾಶ ನೀಡುವುದಿಲ್ಲವೆಂದು ತಿಳಿಸಿದೆ. ಇದನ್ನ ಕಟ್ಟುನಿಟ್ಟಾಗಿ ಪಾಲಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ದೇ, ಗಣೇಶ ವಿಸರ್ಜನೆಗೆ ಬಿಬಿಎಂಪಿ ಒಂದಿಷ್ಟು ಕೆರೆ, ಭಾವಿಗಳನ್ನ ಗುರುತಿಸಿದೆ. ಅಲ್ಲಿ ಮಾತ್ರ ಗಣೇಶ ವಿಸರ್ಜನೆ ಮಾಡಲು ಸೂಚಿಸಿದೆ.

ನಗರದಲ್ಲಿ ಸುರಕ್ಷಿತ ದೃಷ್ಟಿಯಿಂದ ಎಲ್ಲ ಕಡೆ ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ಯಾವುದೇ ರೀತಿಯಿಂದ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಪರಿಸರ ಕಾಪಾಡಲು ಮಣ್ಣಿನ ಗಣಪ ಬಳಸಿ ಎಂದು ತಿಳಿಸಲಾಗಿದ್ದು, ಪರಿಸರ ಮಾಲಿನ್ಯವಾಗದಂತೆ ಹಬ್ಬವನ್ನ ಆಚರಿಸಿ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!