ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ದಾಖಲಾಗಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹಿರಿಯ ನಾಯಕನಿಗೆ ಹೊಸ ಸಂಕಷ್ಟ ಶುರುವಾಗಿದೆ.
ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪತ್ರಿಕ್ರಿಯೆ ನೀಡಿದ್ದು, ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಸಿಎಂ, ಡಿಸಿಎಂ ಅಥವ ನನಗಾಗಲಿ ಯಾವುದೇ ದುರುದ್ದೇಶ ಇಲ್ಲ. ಪೊಲೀಸರು ತನಿಖೆ ನಡೆಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ದೂರು ಕೈಬರಹದಲ್ಲಿ ಇಲ್ಲ. ಟೈಪ್ ಮಾಡಿದ ಪ್ರತಿ ಇದೆ. ಯಡಿಯೂರಪ್ಪನವರನ್ನು ವಶಕ್ಕೆ ಪಡೆಯಬೇಕೆ ಬೇಡವೆ ಅನ್ನೋದು ಪೊಲೀಸರು ನಿರ್ಧರಿಸುತ್ತಾರೆ ಅಂತಾ ಹೇಳಿದರು.