ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಶೈಕ್ಷಣಿಕ ಕ್ಷೇತ್ರದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಹೀಗಾಗಿ ಈ ವರ್ಷ ಮೇ 16ರಿಂದ ಶಾಲೆಗಳನ್ನು ಶುರು ಮಾಡಲಾಗುವುದು ಎಂದು ಈಗಾಗ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಆದರೆ, ಬೇಸಿಗೆ ಬಿಸಿಲು ಜಾಸ್ತಿಯಾಗುತ್ತಿದ್ದು, ರಜೆ ವಿಸ್ತರಣೆ ಮಾಡಬೇಕು ಎಂದು ಹೇಳಲಾಗುತ್ತಿದೆ.
ವಿಧಾನ ಪರಷತ್ ಸದಸ್ಯ ಬಿ.ಎಲ್ ಬೋಜೇಗೌಡ, ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಬಿಸಿಲಿನ ಬೇಗೆ ಹೆಚ್ಚಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಜೆ ವಿಸ್ತರಿಸಬೇಕು ಎಂದಿದ್ದಾರೆ. ತಾಪಮಾನ ಮುಂದುವರೆದಲ್ಲಿ ರಜೆ ವಿಸ್ತರಿಸುವ ಸಾಧ್ಯತೆಯಿದೆ.