ಪ್ರಜಾಸ್ತ್ರ ಸುದ್ದಿ
ರಾಮನಗರ: ರಾಮನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಅವರ ಅನುಯಾಯಿಗಳು ಹೌದು ಅಂತಾರೆ. ನಾಯಿಗೆ ಬಾಲ ಇಲ್ಲಂದ್ರೆ ಹೌದು ಇಲ್ಲ ಅಂತಾರೆ ಅಂತಾ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಈಗ ಗಳಸ್ಯ ಕಂಠಸ್ಯ ಆಗಿದ್ದಾರೆ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ. ಮೇಕೆದಾಟು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ನವರು ಸುಳ್ಳು ಹೇಳುತ್ತಿದ್ದಾರೆ ಎಂದರು.
ನಾನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದು ಪ್ರಶ್ನೆ ಕೇಳುತ್ತೇನೆ, 2023-24ನೇ ಸಾಲಿನ ಬಜೆಟ್ ನಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೇಂದ್ರದಿಂದ ನೀಡುತ್ತೇವೆ ಎಂದು ಹೇಳಿದ್ದರು. ಹಣಕಾಸು ವರ್ಷ ಮುಗಿಯುತ್ತಾ ಬಂದರೂ ಇದುವರೆಗೂ ಒಂದು ರೂಪಾಯಿ ಬಂದಿಲ್ಲ. ಇದು ನಿಜನಾ ಸುಳ್ಳಾ ಎಂದು ಕಿಡಿ ಕಾರಿದರು.