ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ವಿಚಾರ ಸಂಬಂಧ ಮುಖ್ಯಮಂತ್ರಿ 2ನೇ ಬಾರಿಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್ಐಟಿಯಿಂದಲೂ ಮನವಿ ಸಲ್ಲಿಸಲಾಗಿದೆ.
ಇದೀಗ ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ರದ್ದತಿ ಕುರಿತು ಪ್ರಕ್ರಿಯೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದಾಖಲೆಗಳ ಪರಿಶೀಲನೆ ಕ್ರಮ ನಡೆಯುತ್ತಿದೆಯಂತೆ. ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪವಿದೆ. ಪೆನ್ ಡ್ರೈವ್ ದಲ್ಲಿನ ವಿಡಿಯೋ ಎಲ್ಲೆಡೆ ವೈರಲ್ ಆಗಿವೆ. ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ಎಲ್ಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.