ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಹೆಣ್ಮಕ್ಕಳಿಗೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ. ಈ ಪ್ರಕರಣ ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ ಎಸ್ಐಟಿ ನೋಟಿಸ್ ನೀಡಿದೆ.
ವಿಚಾರಣೆಗೆ ಸಹಕರಿಸುತ್ತಿಲ್ಲವೆಂದು ಹೇಳಿ ನೋಟಿಸ್ ನೀಡಲಾಗಿದೆ. ವೈರಲ್ ಆಗಿರುವ ಕೆಲ ವಿಡಿಯೋಗಳಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳ ಫೋಟೋ ಸಹ ಬಹಿರಂಗವಾಗಿವೆ. ಹೀಗಾಗಿ ರಜೆ ಮೇಲೆ ಹೋಗಿದ್ದಾರೆ. ಎಸ್ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ. ಆದ್ದರಿಂದ ನೋಟಿಸ್ ಕೊಡಲಾಗಿದೆ.