ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಹಾಸನ ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗೋಷ್ಠಿ ನಡೆಸಿ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಕೊಲೆಯಾದಾಗ ರಾಜ್ಯಾದ್ಯಂತ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಪ್ರಜ್ವಲ್ ಕರ್ಮಕಾಂಡದ ವಿಚಾರದ ಬಂದಾಗ ಕುರುಡರು, ಕಿವುಡರಾಗಿದ್ದಾರೆ. ಇದು ಇಡೀ ಸಮಾಜವೇ ತಲೆ ತಗ್ಗಿಸುವ ವಿಚಾರ. ಈ ಬಗ್ಗೆ ಬಿಜೆಪಿ ನಾಯಕರು ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದಿದ್ದಾರೆ.
ಪ್ರಜ್ವಲ್ ಕೃತ್ಯಕ್ಕೆ ನೂರಾರು ಮಹಿಳೆಯರು ಬಲಿಯಾಗಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಮೌನವಾಗಿದ್ದಾರೆ. ಬೆಳಗಾವಿಯಲ್ಲಿ ನೇಹಾ ಹತ್ಯೆ ಪ್ರಸ್ತಾಪಿಸಿರುವ ಪ್ರಧಾನಿ ಮೋದಿ, ಪ್ರಜ್ವಲ್ ವಿಡಿಯೋ ಬಗ್ಗೆ ಒಂದು ಮಾತೂ ಆಡಿಲ್ಲ ಎಂದು ಕಿಡಿ ಕಾರಿದ್ದಾರೆ.