ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತು

86

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನುವ ಗಂಭೀರ ಆರೋಪ ಹಾಸನ ಜೆಡಿಎಸ್ ಸಂಸದ, ಬಿಜೆಪಿ-ಜೆಡಿಎಸ್ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿದೆ. ಸಾಕಷ್ಟು ವಿಡಿಯೋ ಎಲ್ಲೆಡೆ ಹರಿದಾಡುತ್ತಿವೆ. ಈ ಸಂಬಂಧ ಜೆಡಿಎಸ್ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಅಮಾನತುಗೊಳಿಸಲಾಗಿದೆ.

ನಗರದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಅವರ ಅನುಮೋದನಂತೆ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ವೇಳೆ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ, ಶಾಸಕರಾದ ಬಂಡೆಪ್ಪ ಕಾಶಂಪೂರ, ಸಿ.ಎಸ್ ಪುಟ್ಟರಾಜು, ಆಲ್ಕೋಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ ಸೇರಿ ಅನೇಕರಿದ್ದರು.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲ ತಂದೆ, ತಾಯಿಯಂದಿರು, ಸಹೋದರ, ಸಹೋದರಿಯರಿಗೆ ನಾನು ವಿನ್ರಮತೆಯಿಂದ ಹೇಳಬಯಸುವುದು ಇಷ್ಟೇ, ಯಾರೂ ಕೂಡ ನನ್ನ ಬಗ್ಗೆಯಾಗಲಿ, ನಮ್ಮ ತಂದೆಯವರ ಬಗ್ಗೆಯಾಗಲಿ ಸಂಶಯಪಡುವುದು ಬೇಡ. ಈ ಪ್ರಕರಣದಲ್ಲಿ ಏನಾದಾರೂ ಸತ್ಯಾಸತ್ಯತೆ ಇದ್ದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ರಾಜ್ಯದ ಸಹೋದರಿಯರ ಪರವಾಗಿ ನಾನೇ ದನಿ ಎತ್ತುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!