ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಶ್ರೀರಾಮ್ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ 30 ದಿನಗಳ ಕಾಲ ಶಿವಮೊಗ್ಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಇಂದು ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ಕೊಡಲು ಮುತಾಲಿಕ್ ಹೊರಟ್ಟಿದ್ದರು. ಈ ವೇಳೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ.
ಮುತಾಲಿಕ್ ಭಾಷಣದಿಂದ ಶಾಂತಿ ಸುವ್ಯವಸ್ಥೆಗೆ ಭಂಗವಾಗುವ ದೃಷ್ಟಿಯಿಂದ ಪೊಲೀಸ್ ಇಲಾಖೆ ಮನವಿ ಮೇರೆಗೆ ಜಿಲ್ಲಾಡಳಿತ 30 ದಿನಗಳ ನಿರ್ಬಂಧ ಹೇರಿದೆ. ಈ ಕುರಿತು ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಅವರನ್ನು ದಾವಣಗೆರೆಗೆ ಕಳುಹಿಸಿ ಕೊಡಲಾಯಿತು.