ಪ್ರಜಾಸ್ತ್ರ ಸುದ್ದಿ
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿಯ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿದರು. ಇರೋ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬದ ಸ್ಥಿತಿ ಕಂಡು ಏನು ಹೇಳಬೇಕೋ ತೋಚುತ್ತಿಲ್ಲವೆಂದರು.
ಪ್ರವೀಣ್ ಅವರ ಮನೆಯ ಬೀಳುವ ಸ್ಥಿತಿಯಲ್ಲಿದೆ. ಪಕ್ಷದ ಮುಖಂಡರು, ಈ ಭಾಗದ ಶಾಸಕರು ಕೂಡಿಕೊಂಡು ಸುಸಜ್ಜಿತವಾದ ಮನೆ ಕಟ್ಟಿಕೊಡಲಾಗುವುದು ಎಂದರು. ಇನ್ನು ಸಚಿವ ಸಿ.ಎಸ್ ಅಶ್ವಥನಾರಾಯಣ್ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.
ಇನ್ನು ಬಿಜೆಪಿ ಪಕ್ಷದ ವತಿಯಿಂದ 25 ಲಕ್ಷ ರೂಪಾಯಿಯನ್ನು ಪ್ರವೀಣ್ ಕುಟುಂಬಕ್ಕೆ ನೀಡಲು ನಿರ್ಧರಿಸಲಾಗಿದೆಯಂತೆ. ಈ ಮೂಲಕ ಮೃತ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಬಿಜೆಪಿ ಮುಂದಾಗಿದೆ.