ಬಿಜೆಪಿ ವಿರುದ್ಧವೇ ಹಿಂದೂ ಸಂಘಟನೆಗಳ ಆಕ್ರೋಶ

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸುಳ್ಯದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಬಿಜೆಪಿ ವಿರುದ್ಧವೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದಲ್ಲಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಹಿಂದೂ ಕಾರ್ಯಕರ್ತರ ಹತ್ಯೆಗಳು ನಿಲ್ಲುತ್ತಿಲ್ಲವೆಂದು ಕಿಡಿ ಕಾರುತ್ತಿದ್ದಾರೆ. ಹೀಗೆ ಒಬ್ಬೊಬ್ಬರನ್ನೇ ಕಳೆದುಕೊಳ್ಳುತ್ತಿದ್ದರೂ, ರಾಜ್ಯ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲವೆಂದು ವಾಗ್ದಾಳಿ ನಡೆಸಲಾಗುತ್ತಿದೆ.

ಬಿಜೆಪಿ ಸಚಿವರು, ಶಾಸಕರು ಹೇಳುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಸಂಬಂಧವಿಲ್ಲವೆಂದು ಕಿಡಿ ಕಾರಲಾಗುತ್ತಿದೆ. ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಾಗ ಜ್ಞಾನೇಂದ್ರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!