ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾನದ ಆತ್ಮವಾಗಿರುವ ಪೀಠಿಕೆಯನ್ನು ಅಳವಡಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಕಾಲೇಜುಗಳ ಫಲಕದಲ್ಲಿ ಸಂವಿಧಾನ ಪೀಠಿಕೆ ಅಳವಡಿಸಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕಾಲೇಜುಗಳ ಪ್ರಾಂಶುಪಾಲರು ಕೇಂದ್ರ ಕಾನೂನು ಇಲಾಖೆಯಿಂದ ಪೀಠಿಕೆಯನ್ನು ಖರೀದಿಸಬೇಕು. ಅದನ್ನು ಕಾಲೇಜಿನಲ್ಲಿ ಪ್ರಕಟಿಸಬೇಕು. ಸಂವಿಧಾನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಈ ರೀತಿ ಸೂಚನೆ ಹೊರಡಿಸಲಾಗಿದೆ.