3.35 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡನೆಗೆ ಸಿದ್ಧತೆ

103

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ಈ ಬಾರಿಯ ತನ್ನ ಮೊದಲ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದೆ. ಬರೋಬ್ಬರಿ 3.35 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರದಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ಶಿಬರಿ ಆಯೋಜಿಸಲಾಗಿದೆ. ಈ ವೇಳೆ ಮಾತನಾಡಿರುವ ಅವರು ಬಜೆಟ್ ಮಂಡನೆ ಕುರಿತು ಪ್ರಸ್ತಾಪಿಸಿದರು. ಜೊತೆಗೆ ಅನ್ನಭಾಗ್ಯ ಯೋಜನೆ ಸಂಬಂಧ ಈಗಾಗ್ಲೇ ಕೇಂದ್ರದ ಅಕ್ಕಿ ಸಿಗದೆ ಇರುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಿ ವಿತರಣೆ ಮಾಡಬೇಕಾಗಿರುವುದರಿಂದ ಯೋಜನೆ ವಿಳಂಬವಾಗಲಿದೆ ಅಂತಾ ಸ್ಪಷ್ಟನೆ ನೀಡಿದರು.




Leave a Reply

Your email address will not be published. Required fields are marked *

error: Content is protected !!