ಮತ ಎಣಿಕೆಗೆ ಸಕಲ ಸಿದ್ಧತೆ

166

ಪ್ರಜಾಸ್ತ್ರ ಸುದ್ದಿ

ಮೈಸೂರು: ಮೇ 13 ಶನಿವಾರ ಮುಂಜಾನೆ 7.30ರಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಎಲ್ಲೆಡೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ನಗರದ ಪಡವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜಿನಲ್ಲಿ ಸಿದ್ಧತೆ ನಡೆದಿದೆ.

ಮತ ಕೇಂದ್ರದ ಸುತ್ತ 3 ಸುತ್ತಿನ ಭದ್ರತೆಯನ್ನು ಒದಗಿಸಲಾಗಿದೆ. ಸಿಎಪಿಎಫ್ ತುಕಡಿ, ಸಶಸ್ತ್ರ ಮೀಸಲು ಪಡೆ ಹಾಗೂ ಸ್ಥಳೀಯ ಪೊಲೀಸ್ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಜಿಲ್ಲೆಯ 11 ಕ್ಷೇತ್ರಗಳಲ್ಲಿ143 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪಿರಿಯಾಪಟ್ಟಣ, ಕೆ.ಆರ್ ನಗರ, ಹುಣಸೂರು, ಹೆಚ್.ಡಿ ಕೋಟೆ, ನಂಜನಗೂಡು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ವರುಣಾ ಹಾಗೂ ಟಿ.ನರಸೀಪುರ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!