ರಾಷ್ಟ್ರಪತಿ ಸ್ವಾತಂತ್ರ್ಯ ಭಾಷಣದಲ್ಲಿ ಕುವೆಂಪು ಸಾಲು

278

ಪ್ರಜಾಸ್ತ್ರ ಸುದ್ದಿ

ನವದೆಹಲಿ: 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ಭಾನುವಾರ ಸಂಜೆ ಮಾತನಾಡಿದ್ದು, ತ್ಯಾಗ, ಬಲಿದಾನ ಹಾಗೂ ನಿರಂತರ ಹೋರಾಟದ ಫಲವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಇದು ಕೇವಲ ಒಬ್ಬರ ಸ್ವತ್ತಲ್ಲ. ಎಲ್ಲರ ಹಕ್ಕು ಎಂದರು.

ದೇಶದ ಸಂಪ್ರದಾಯದಂತೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದೇಶವನ್ನುದ್ದೇಶಿ ಮಾತನಾಡಿದರು. ಈ ವೇಳೆ ಕನ್ನಡದ ಮೊದಲ ರಾಷ್ಟ್ರಕವಿ ಕುವೆಂಪು ಅವರು ಬರೆದ ‘ನಾನಳಿವೆ ನೀನಳಿವೆ ನಮ್ಮೆಲಬುಗಳ ಮೇಲೆ ಮೂಡುವುದು ಮೂಡುವುದು ನವ ಭಾರತದ ಲೀಲೆ’ ಸಾಲುಗಳನ್ನು ಹೇಳುವ ಮೂಲಕ ದೇಶಕ್ಕೆ ಸಂದೇಶ ಸಾರಿದ್ದಾರೆ.

ಭಾರತದ ಸ್ವಾತಂತ್ರ್ಯವು 75 ವರ್ಷಗಳನ್ನು ಪೂರೈಸುವ ಸಂದರ್ಭದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಪ್ರಧಾನಿ ಮೋದಿ ಮನೆ ಮನೆಯ ಮೇಲೆ ತ್ರಿವರ್ಣಧ್ವಜ ಹಾರಾಡಲಿ ಎಂದು ಕರೆ ಕೊಟ್ಟ ಹಿನ್ನೆಲೆಯಲ್ಲಿ ಎಲ್ಲಡೆ ತ್ರಿವರ್ಣಧ್ವಜ ಹಾರಾಡುತ್ತಿದೆ. ಜನರಲ್ಲಿ ಶಕ್ತಿ, ಸಾಮರ್ಥ್ಯ ಉತ್ತೇಜಿಸಲು ಭಾರತ 2.0 ಸಕ್ರಿಯಗೊಳಿಸಲಾಗುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!