ಪ್ರಜಾಸ್ತ್ರ ಸುದ್ದಿ
ಮುಂಬೈ: ರಾಷ್ಟ್ರಪತಿ ಚುನಾವಣೆ ರೇಸಿನಲ್ಲಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಇಲ್ಲವೆಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ. ಜುಲೈ 18ರಂದು ನಡೆಯಲಿರುವ ಚುನಾವಣೆಗೆ ಪವಾರ್ ಉತ್ಸುಕರಾಗಿದ್ದಾರೆ ಎಂದು ಹೇಳಲಾಗುತಿತ್ತು. ಆದರೆ, ರೇಸಿನಲ್ಲಿ ಅವರಿಲ್ಲವಂತೆ.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಶರದ್ ಪವಾರ್ ಹೆಸರನ್ನು ಪ್ರಸ್ತಾಪಿಸಿದ್ದರು. ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೂ ಮಾತುಕತೆ ನಡೆಸಲಾಗಿದೆ ಎಂದಿದ್ದರು. ಅಲ್ದೇ, ಆಪ್ ಪಕ್ಷದಿಂದ ಬೆಂಬಲ ವ್ಯಕ್ತಪಡಿಸಲಾಗಿತ್ತು. ಆದರೆ, ಸ್ವತಃ ಸಿಪಿಎಂ ನಾಯಕರೊಬ್ಬರು, ರಾಷ್ಟ್ರಪತಿ ಭವನಕ್ಕೆ ಶರದ್ ಪವಾರ್ ಅವರು ಸೀಮಿತವಾಗುವುದಿಲ್ಲವೆಂದು ಹೇಳಿದ್ದಾರೆ.