ಸಂಸತ್ ಸದಸ್ಯರು ಗಾಂಧಿ ತತ್ವ ಪಾಲಿಸಬೇಕು: ನಿರ್ಗಮಿತ ರಾಷ್ಟ್ರಪತಿ ಕೋವಿಂದ್

293

ಪ್ರಜಾಸ್ತ್ರ ಸುದ್ದಿ

ನವದೆಹಲಿ: ನಿಗರ್ಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶನಿವಾರ ಬೀಳ್ಕೊಡುಗೆ ನೀಡಲಾಯಿತು. ಸಂಸತ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಜಂಟಿಯಾಗಿ ಬೀಳ್ಕೊಟ್ಟರು.

ಈ ವೇಳೆ ಮಾತನಾಡಿದ ನಿರ್ಗಮಿತ ರಾಷ್ಟ್ರಪತಿ ಕೋವಿಂದ್ ಅವರು, ಐದು ವರ್ಷಗಳ ಹಿಂದೆ ನಾನು ಇಲ್ಲಿ ಭಾರತದ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೆ. ಸಂಸತ್ತು ಪ್ರಜಾಪ್ರಭುತ್ವದ ದೇವಾಲಯವಾಗಿದೆ. ಸಂಸತ್ತಿನಲ್ಲಿ ಚರ್ಚೆ ಹಾಗೂ ಭಿನ್ನಾಭಿಪ್ರಾಯದ ಹಕ್ಕುಗಳನ್ನು ಚಲಾಯಿಸುವಾಗ ಗಾಂಧಿ ತತ್ವವನ್ನು ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು.

ಮುಂದಿನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ಶುಭ ಕೋರಿದರು. ತಮ್ಮ ಅಧಿಕಾರವಧಿಯಲ್ಲಿ ಬೆಂಬಲ ನೀಡಿದಕ್ಕಾಗಿ ಉಪ ರಾಷ್ಟ್ರಪತಿ, ಪ್ರಧಾನಿ, ಸ್ಪೀಕರ್, ಮಂತ್ರಿ ಮಂಡಲ ಸೇರಿ ಎಲ್ಲ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಈ ವೇಳೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!