ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದು, ಅಕ್ಟೋಬರ್ 7ರಂದು ಬಿಳಿಗಿರಿ ರಂಗನ ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಅಕ್ಟೋಬರ್ 6 ಮತ್ತು 7ರಂದು ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಚಾಮರಾಜನಗರ ಜಿಲ್ಲಾಡಳಿತ ವಡ್ಡಿಗೆರೆ ಹೆಲಿಪ್ಯಾಡ್, ಬಿಳಿಗಿರಿ ರಂಗನ ಬೆಟ್ಟ, ಚಾಮರಾಜನಗರ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇನ್ನು 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಏರ್ ಕ್ರಾಪ್ಟ್, ಏರ್ ಬಲೂನ್, ಡ್ರೋನ್, ಬ್ಯಾನರ್ ಬಟ್ಟಿಂಗ್ಸ್ ಹಾಕುವಂತಿಲ್ಲವೆಂದು ಸೂಚಿಸಲಾಗಿದೆ.
ರಾಷ್ಟ್ರಪತಿಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಇರಲಿದ್ದಾರೆ. ಅಕ್ಟೋಬರ್ 7 ಮತ್ತು 8ರಂದು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೈಸೂರು, ಚಾಮರಾಜನಗರ ಬಳಿಕ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 9ರಂದು ವಾಪಸ್ ದೆಹಲಿಗೆ ತೆರಳಲಿದ್ದಾರೆ.