ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ದ್ರೌಪದಿ ಮುರ್ಮು ಅವರು ಭಾನುವಾರ ಸಿಲಿಕಾನ್ ಸಿಟಿಗೆ ಭೇಟಿ ನೀಡಿದರು. ಬಿಜೆಪಿ ಶಾಸಕರು, ಸಂಸದರ ಬೆಂಬಲ ಕೋರಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕರು, ಸಂಸದರನ್ನು ಭೇಟಿ ಮಾಡಿ ತಮಗೆ ಬೆಂಬಲ ನೀಡಬೇಕೆಂದು ಕೋರಿದರು. ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಜುಲೈ 18ರಂದು ಚುನಾವಣೆ ನಡೆಯಲಿದೆ.