ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹೆಣ್ಮಕ್ಕಳ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನು ಪಕ್ಷದಿಂದ ಅಮನಾತು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ.
ಎಸ್ಐಟಿಯಿಂದ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವುದರಿಂದ ಪಕ್ಷದ ಕಾರ್ಯಕರ್ತರು, ನಾಯಕರು ಗಟ್ಟಿಯಾಗಿ ಮಾತನಾಡಲು ಆಗುತ್ತಿಲ್ಲ. ಪಕ್ಷಕ್ಕೆ ಮುಜುಗರವಾಗುತ್ತಿದೆ. ಹೀಗಾಗಿ ಕೂಡಲೇ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕೆಂದು ಪಕ್ಷದ ನಾಯಕರೇ ಒತ್ತಾಯಿಸುತ್ತಿದ್ದಾರಂತೆ.
ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಾಗಿದೆ. ಈ ವೇಳೆ ರೇವಣ್ಣ ಅಮಾನತು ಕುರಿತು ಚರ್ಚೆಯಾಗಲಿದೆ. ಇನ್ನೊಂದು ಕಡೆ ಇಂದು ಜಾಮೀನು ಅರ್ಜಿಯ ವಿಚಾರಣೆ ಸಹ ನಡೆಯಲಿದೆ. ಹೀಗಾಗಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.