Search

ಬೆಲೆ ಏರಿಕೆ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯ

233

ಪ್ರಜಾಸ್ತ್ರ ಸುದ್ದಿ

ರಾಯಚೂರು: ಪೆಟ್ರೋಲ್, ಡಿಸೇಲ್, ಸಿಲಿಂಡರ್ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ಮಾಡಲಾಯ್ತು. ದಲಿತ ಸೇನೆ ವತಿಯಿಂದ ತಳ್ಳು ಗಾಡಿಯಲ್ಲಿ ಸ್ಕೂಟರ್, ಪೆಟ್ರೋಲ್, ಗ್ಯಾಸ್ ಇಟ್ಟು ಆಕ್ರೋಶ ವ್ಯಕ್ತಪಡಿಸಲಾಯ್ತು.

ದೇಶದಲ್ಲಿ ಜನ ಸಾಮಾನ್ಯರು ಆರ್ಥಿಕವಾಗಿ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಆದ್ರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ದಿನೆದಿನೆ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಹೈರಾಣಾಗಿದ್ದಾರೆ. ದಿನ ಬಳಕೆ ವಸ್ತುಗಳನ್ನ ಖರೀದಿಸಲು ಹಿಂದೆ ಮುಂದೆ ನೋಡ್ತಿದ್ದು ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಇದನ್ನ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಯ್ತು.




Leave a Reply

Your email address will not be published. Required fields are marked *

error: Content is protected !!