ಬಸ್ಸಿನಿಂದ ಬಿದ್ದು ಕಂಡಕ್ಟರ್ ಸಾವು

221

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಿಂದ ಕಂಡಕ್ಟರ್ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬಾಗಲಕೋಟೆ ಮೂಲದ ಈರಯ್ಯ(23) ಮೃತ ದುರ್ದೈವಿ.

ಸುರತ್ಕಲ್ ತಡಂಬೈಲ್ ನಲ್ಲಿ ವಾಸವಾಗಿದ್ದ ಈರಯ್ಯ ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಕೆಪಿಟಿಯಿಂದ ಬರುತ್ತಿದ್ದ ಬಸ್ ನಂತೂರು ಸರ್ಕಲ್ ಹತ್ತಿರ ವೇಗವಾಗಿ ತಿರುವು ಪಡೆಯುತ್ತಿದ್ದಾಗ ಮುಂದಿನ ಬಾಗಿಲಿನಲ್ಲಿ ನಿಂತಿದ್ದ ಈರಯ್ಯ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಟ್ರಾಫಿಕ್ ಪೊಲೀಸರು, ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದರು.

ಅತಿಯಾದ ವೇಗವೆ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!