ಅಸಾಧ್ಯ ಬೇಡಿಕೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

166

ಪ್ರಜಾಸ್ತ್ರ ಸುದ್ದಿ

ಮೈಸೂರು: ಶಕ್ತಿ ಯೋಜನೆಯಿಂದ ತಮಗೆ ನಷ್ಟವಾಗಿದೆ ಅನ್ನೋದು ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ನಡೆಸಲಾಯಿತು. ಇದಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅಸಾಧ್ಯವಾದ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಮಹಿಳೆಯರಿಗೆ ಅನುಕೂಲವಾಗಲಿ ಎಂದು ಶಕ್ತಿ ಯೋಜನೆ ತಂದಿದ್ದೇವೆ. ಇದರಿಂದ ನಷ್ಟವಾಗುತ್ತಿದೆ. ಅದನ್ನು ನೀಡಿ ಎಂದರೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ. ಶಾಂತಿಯುತವಾಗಿ ನಡೆಸಲಿ ಎಂದರು. ಬೆಂಗಳೂರಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಇದು ರಾಜಕೀಯ ಪ್ರೇರಿತ ಬಂದ್. ಕಳೆದ ನಾಲ್ಕು ವರ್ಷಗಳಿಂದ ಸಾರಿಗೆ ಸಂಸ್ಥೆಗಳ ಬೇಡಿಕೆಗಳಿವೆ ಅಂತಾ ಹೇಳಿದರು.

ಸಾರಿಗೆ ಅವರ ಬೇಡಿಕೆ ಸಂಬಂಧ ಸಿಎಂ ಕರೆದ ಸಭೆಗೆ ಬರಲಿಲ್ಲ. ಯಾರೋ ಅಧಿಕಾರಿ ಏನೂ ಹೇಳಿದರು ಎಂದು ಪ್ರತಿನಿಧಿಗಳು ಭಾಗವಹಿಸಲಿಲ್ಲ. ಕಾನೂನಾತ್ಮ ಬೇಡಿಕೆಗಳಿದ್ದರೆ ಈಡೇರಿಸಲು ಸರ್ಕಾರ ಸಿದ್ಧವಾಗಿದೆ ಅಂತಾ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.




Leave a Reply

Your email address will not be published. Required fields are marked *

error: Content is protected !!