ಪ್ರಜಾಸ್ತ್ರ ಸುದ್ದಿ
ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ರೈತರನ್ನು ಮಾತನಾಡಿಸಲು ಹೋದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಬಂಧಿಸಲಾಗಿದೆ. ಇದು ಕಾನೂನು ಬಾಹಿರ ಎಂದು ಕೇಂದ್ರ ಮಾಜಿ ಗೃಹ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಈ ಘಟನೆ ಉತ್ತರ ಪ್ರದೇಶದಲ್ಲಿ ಕಾನೂನಿಗೆ ಬೆಲೆ ಇಲ್ಲ ಅನ್ನೋದು ತೋರಿಸುತ್ತದೆ. ಪೊಲೀಸ್ ಅಧಿಕಾರಿಗಳು ಸಹ ಅದನ್ನೇ ಮಾಡುತ್ತಿದ್ದಾರೆ. ಸಿಆರ್ ಪಿಸಿ 151ರ ಅಡಿಯಲ್ಲಿ ಬಂಧಿಸಲಾಗಿದೆ ಅಂತಾರೆ. ಆದರೆ, 151ರ ಅಡಿಯಲ್ಲಿ ನ್ಯಾಯಾಧೀಶರ ಒಪ್ಪಿಗೆ ಇಲ್ಲದೆ 24 ಗಂಟೆಗಿಂತ ಹೆಚ್ಚು ಕಾಲ ಬಂಧಿಸುವಂತಿಲ್ಲ. ಆದರೆ, ಇಲ್ಲಿ ಕಾನೂನು ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಚಿದಂಬರಂ ಸಿಎಂ ಯೋಗಿ ಆದಿತ್ಯನಾಥ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.